TSK

TSK · ಓಬದ್ಯ 1:21

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು.

ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.

“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.

ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.

ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.

ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು.

¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.

ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.

ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”

ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು.

‹“ಪರಲೋಕದಲ್ಲಿರುವ ನಮ್ಮ ತಂದೆಯೇ,› ‹ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ.› ‹ನಿನ್ನ ರಾಜ್ಯವು ಬರಲಿ.› ‹ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ› ‹ಭೂಲೋಕದಲ್ಲಿಯೂ ನೆರವೇರಲಿ.›

ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.

ದೇವಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪನ್ನು ಹೊಂದಬೇಕಾಗಿರುವಲ್ಲಿ ಅತ್ಯಲ್ಪವಾದ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅನರ್ಹರಾಗಿದ್ದೀರೋ?

ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.

ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.

¶ ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.