TSK

TSK · ಓಬದ್ಯ 1:5

مراجع Treasury of Scripture Knowledge في ಕನ್ನಡ IRV.

العودة إلى المقطع

ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.

ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!

ಎಣ್ಣೆಯ ಮರವನ್ನು ಕಡಿದ ಬಳಿಕ, ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು.

ದ್ರಾಕ್ಷಿಯ ಹಣ್ಣನ್ನು ಕೀಳುವವರು ನಿನ್ನ ಕಡೆಗೆ ಬಂದರೆ ಹಕ್ಕಲನ್ನೂ ಉಳಿಸುವುದಿಲ್ಲ; ಕಳ್ಳರು ರಾತ್ರಿವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಹಾಳುಮಾಡುವರು.

ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.

ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.