ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.
TSK
TSK · ಫಿಲಿಪ್ಪಿಯವರಿಗೆ 1:21
مراجع Treasury of Scripture Knowledge في ಕನ್ನಡ IRV.
ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.
¶ ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.
ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ.
ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.
ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.
¶ ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.