ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.
TSK
TSK · ಫಿಲಿಪ್ಪಿಯವರಿಗೆ 1:7
مراجع Treasury of Scripture Knowledge في ಕನ್ನಡ IRV.
¶ ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;
ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.
ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುತ್ತಿಲ್ಲ; ನಿಮ್ಮ ಜೊತೆ ಸಾಯುವುದಕ್ಕೂ, ಬದುಕುವುದಕ್ಕೂ ಎನ್ನುವಷ್ಟರ ಮಟ್ಟಿಗೆ ನೀವು ನಮ್ಮ ಹೃದಯದಲ್ಲಿದ್ದೀರೆಂದು ನಾನು ಮೊದಲೇ ಹೇಳಿದ್ದೆನಲ್ಲಾ.
¶ ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ.
ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.
ಇವರಂತೂ ನಾನು ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವುದಕ್ಕಾಗಿ ಇಲ್ಲಿ ಹಾಕಲ್ಪಟ್ಟಿದ್ದೆನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಿದ್ದಾರೆ.
ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.
¶ ನಾವು ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.
¶ ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.
¶ ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.
ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.
¶ ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,
ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.