TSK

TSK · ಫಿಲಿಪ್ಪಿಯವರಿಗೆ 2:1

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.

¶ ‹“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.›

‹ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.›

¶ ‹“ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ›‹ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.›

¶ ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.

ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.

ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.

¶ ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?

ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.

ಏಕೆಂದರೆ ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಕ್ರಿಸ್ತನ ಮೂಲಕವಾಗಿ ಹೆಚ್ಚಾದ ಆದರಣೆಯೂ ನಮಗೆ ದೊರೆಯುತ್ತದೆ.

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.

¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,

ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.

ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.

ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.

ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.

ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.

ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.

ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ.

ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ.