TSK

TSK · ಫಿಲಿಪ್ಪಿಯವರಿಗೆ 2:14

مراجع Treasury of Scripture Knowledge في ಕನ್ನಡ IRV.

العودة إلى المقطع

ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.

ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ, ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.

ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.

¶ ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, ‹“ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?”› ಎಂದು ಶಿಷ್ಯರನ್ನು ಕೇಳಿದನು.

¶ ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.

¶ “ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿನಗಳ ಹಿಂದೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದಿದೆ.

¶ ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?

ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು.

ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.

ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.

ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.

¶ ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.

ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.

ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ. ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.

¶ ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.