ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
TSK
TSK · ಫಿಲಿಪ್ಪಿಯವರಿಗೆ 2:7
مراجع Treasury of Scripture Knowledge في ಕನ್ನಡ IRV.
ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”
ಇಗೋ, ನನ್ನ ಸೇವಕನು ಕೃತಾರ್ಥನಾಗುವನು. ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.
ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.
ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.
¶ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
‹ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು”› ಎಂದು ಹೇಳಿದನು.
‹ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಬೇಕು.›
¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.
ಯಾಕೆಂದರೆ ಕ್ರಿಸ್ತನು ಸಹ ತನ್ನ ಹಿತಕ್ಕಾಗಿ ಚಿಂತಿಸಲಿಲ್ಲ. “ದೇವರೇ ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೂ ಬಂದವು” ಎಂದು ಬರೆದಿದೆಯಲ್ಲಾ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.
ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,
ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.