ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.
TSK
TSK · ಫಿಲಿಪ್ಪಿಯವರಿಗೆ 3:2
مراجع Treasury of Scripture Knowledge في ಕನ್ನಡ IRV.
ದುಷ್ಟರೇ, ತೊಲಗಿರಿ, ನನ್ನ ದೇವರ ಆಜ್ಞೆಗಳನ್ನು ಕೈಗೊಳ್ಳುವೆನು.
ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.
¶ ‹“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.›
‹ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.›
ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.
¶ ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ.
¶ ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.
ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.
ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.
ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.
“ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
‹ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು›‹ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು›‹ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.›
‹ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ›‹ಹೊರಗಿರುವರು”› ಎಂದು ಹೇಳಿದನು.