TSK

TSK · ಫಿಲಿಪ್ಪಿಯವರಿಗೆ 3:20

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.

ನಿನ್ನ ಚಿತ್ತವನ್ನು ತಿಳಿಯಪಡಿಸಿ, ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.

¶ ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.

ಯೇಸು ಅವನಿಗೆ, ‹“ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.

‹ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.›

“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.

ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು.

ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.

ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು.

¶ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.

ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು.

ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.

ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.

¶ ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,

ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.

ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು.