¶ ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.
TSK
TSK · ಙ್ಞಾನೋಕ್ತಿಗಳು 1:22
مراجع Treasury of Scripture Knowledge في ಕನ್ನಡ IRV.
“ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.
ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,
ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು.
ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ ತಿಳಿವಳಿಕೆಯನ್ನು ಹಗೆಮಾಡಿದರು.
“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,
ಅಲ್ಪಬುದ್ಧಿಯುಳ್ಳ ಅನೇಕ ಯುವಕರು ಕಾಣಿಸಿದರು. ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನನ್ನು ಕಂಡೆನು.
ಆಕೆಯು ಬುದ್ಧಿಹೀನರಿಗೆ, “ಮೂಢನಾಗಿರುವವನು ಈ ಕಡೆಗೆ ತಿರುಗಲಿ,
ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು.
ಧರ್ಮನಿಂದಕರಿಗೆ ದಂಡನೆಯ ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.
‹ನೀವು ಹೋಗಿ, ‘ನಾನು ಯಜ್ಞವನ್ನಲ್ಲ,›‹ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.›
ಅದಕ್ಕೆ ಯೇಸು, ‹“ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ”› ಅಂದನು.
‹“ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.›
¶ ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,