ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.
TSK
TSK · ಙ್ಞಾನೋಕ್ತಿಗಳು 1:33
مراجع Treasury of Scripture Knowledge في ಕನ್ನಡ IRV.
ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು.
ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ; ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ, ಅವನ ಮನಸ್ಸು ಸ್ಥಿರವಾಗಿರುವುದು.
ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ, ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.
ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.
ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು.
ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ನಾನು ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆ” ಎಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.
‹ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ”› ಅಂದನು.
‹ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.›
ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.