ಆದಿಕಾಂಡ 49:15
TSK
ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ ಸುಖಾಸ್ಪದವೂ ಆಗಿರುವುದನ್ನು ಕಂಡನು. ಅವನು ಹೊರೆಯನ್ನು ಹೊರುವುದಕ್ಕೆ ಬೆನ್ನು ಬಗ್ಗಿಸಿಕೊಂಡು ಬಿಟ್ಟೀ ಸೇವೆಮಾಡುವನು.
TSK
مراجع Treasury of Scripture Knowledge في ಕನ್ನಡ IRV.
ತಾನು ಸೇರಿದ ಪ್ರದೇಶವು ವಿಶ್ರಾಂತಿಗೆ ಅನುಕೂಲವೂ ಸುಖಾಸ್ಪದವೂ ಆಗಿರುವುದನ್ನು ಕಂಡನು. ಅವನು ಹೊರೆಯನ್ನು ಹೊರುವುದಕ್ಕೆ ಬೆನ್ನು ಬಗ್ಗಿಸಿಕೊಂಡು ಬಿಟ್ಟೀ ಸೇವೆಮಾಡುವನು.
ಯೌವನಸ್ಥನಾದ ಯಾರೊಬ್ಬಾಮನು ಬಹು ಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಯೋಸೇಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು.
ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ.
ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.
ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.
“ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು” ಎಂಬುದು ಸೋಮಾರಿಯ ನೆವ.
ಸೋಮಾರಿಯ ಹೊಲದ ಮೇಲೆಯೂ, ಬುದ್ಧಿಹೀನನ ದ್ರಾಕ್ಷಿಯ ತೋಟದ ಮೇಲೆಯೂ ಹಾದು ಹೋದೆನು.
ಕದವು ತಿರುಗುಣಿಯಲ್ಲಿ ಹೇಗೋ, ಹಾಗೆ ಸೋಮಾರಿಯು ಹಾಸಿಗೆಯಲ್ಲಿ ಹೊರಳಾಡುತ್ತಿರುವನು.