ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.
TSK
TSK · ಙ್ಞಾನೋಕ್ತಿಗಳು 12:5
مراجع Treasury of Scripture Knowledge في ಕನ್ನಡ IRV.
ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ.
ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ, ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.
ಸಜ್ಜನರ ಆಶೆಯು ಮಂಗಳಾಸ್ಪದ, ದುರ್ಜನರ ನಿರೀಕ್ಷೆಯು ರೋಷಾಸ್ಪದ.
ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.
ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?
ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.
¶ ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.
ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.