ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.
TSK
TSK · ಙ್ಞಾನೋಕ್ತಿಗಳು 12:8
مراجع Treasury of Scripture Knowledge في ಕನ್ನಡ IRV.
ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು.
ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.
ಆದಕಾರಣ ಬಿರುಗಾಳಿಯಂತೆ ಅಪಾಯವೂ, ತುಫಾನಿನಂತೆ ಆಪತ್ತೂ ಬಂದು, ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ
ಸದುಪದೇಶದ ಕೊರತೆಯಿಂದಲೇ ನಾಶವಾಗುವನು, ತನ್ನ ಅತಿಮೂರ್ಖತನದಿಂದ ಭ್ರಾಂತನಾಗುವನು.
ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.
“ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.”
¶ ಕರ್ತನು ಹೇಳಿದ್ದೇನಂದರೆ, ‹“ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?›
ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.
ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.