TSK

TSK · ಙ್ಞಾನೋಕ್ತಿಗಳು 14:15

مراجع Treasury of Scripture Knowledge في ಕನ್ನಡ IRV.

العودة إلى المقطع

ದಾವೀದನು ಈ ವರ್ತಮಾನ ತಂದ ಆ ಪ್ರಾಯಸ್ಥನಿಗೆ “ಸೌಲನೂ ಅವನ ಮಗನಾದ ಯೋನಾತಾನನೂ ಸತ್ತಿರುವುದು ನಿನಗೆ ಹೇಗೆ ಗೊತ್ತಾಯಿತು” ಎಂದು ಪ್ರಶ್ನಿಸಲು ಅವನು,

ಅವರು ನಾಲ್ಕು ಬಾರಿ ನನಗೆ ಅದೇ ಪ್ರಕಾರ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರವನ್ನು ಕೊಟ್ಟೆನು.

ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.

ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.

ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು.

ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,

¶ ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.