¶ ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.
TSK
TSK · ಙ್ಞಾನೋಕ್ತಿಗಳು 14:19
مراجع Treasury of Scripture Knowledge في ಕನ್ನಡ IRV.
¶ ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವನನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ, ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು, ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು” ಎಂದನು.
ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.
ಯೆಹೋಷಾಫಾಟನು, “ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು” ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.
ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು.
ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.
ಜನಾಂಗಗಳವರು ನೋಡಿ ತಮ್ಮ ಮಹಾ ಶಕ್ತಿಗೂ ನಾಚಿಕೆಪಡುವರು. ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವರು. ಅವರ ಕಿವಿ ಕೇಳದಿರುವುದು.
ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.