¶ “‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.
TSK
TSK · ಙ್ಞಾನೋಕ್ತಿಗಳು 14:31
مراجع Treasury of Scripture Knowledge في ಕನ್ನಡ IRV.
ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.
ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.
ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.
ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ.
‹ಅದಕ್ಕೆ ಉತ್ತರವಾಗಿ ಅರಸನು,›‹‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›
ನೀವು ದೇವರ ಮೇಲಣ ನಂಬಿಕೆಯಲ್ಲಿ, ವಾಕ್ಚಾತುರ್ಯದಲ್ಲಿ, ಜ್ಞಾನದಲ್ಲಿ, ಸಕಲ ವಿಧವಾದ ಆಸಕ್ತಿಯಲ್ಲಿ ಮತ್ತು ನಮ್ಮ ಪ್ರೇರಣೆಯಿಂದ ನಿಮ್ಮಲ್ಲಿ ಹುಟ್ಟಿದ ಪ್ರೀತಿಯಲ್ಲಿ ಹೇಗೆ ಸಮೃದ್ಧರಾಗಿದ್ದೀರೋ ಹಾಗೆಯೇ ಈ ಧರ್ಮಕಾರ್ಯದಲ್ಲಿಯೂ ಸಮೃದ್ಧರಾಗಿ ಮುಂದುವರೆಯಿರಿ.
ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.