TSK

TSK · ಙ್ಞಾನೋಕ್ತಿಗಳು 16:29

مراجع Treasury of Scripture Knowledge في ಕನ್ನಡ IRV.

العودة إلى المقطع

ಸೌಲನು ಕೂಡಲೇ ದೂತರನ್ನು ಕರಿಸಿ ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ” ಎಂದು ಹೇಳಿ

ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ?

ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ, ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚ ಕೊಟ್ಟಿದ್ದರು.

ಇದರಿಂದ ನೀನು ದುರ್ಮಾರ್ಗದಿಂದಲೂ, ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ.

ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು.