ಅಹಜ್ಯನು ಯೋರಾಮನ ಬಳಿಗೆ ಹೋದದ್ದು ದೈವಸಂಕಲ್ಪದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ಪಟ್ಟಾಭಿಷೇಕ ಮಾಡಿಸಿದ್ದನು.
TSK
TSK · ಙ್ಞಾನೋಕ್ತಿಗಳು 16:9
مراجع Treasury of Scripture Knowledge في ಕನ್ನಡ IRV.
ಹೃದಯದ ಸಂಕಲ್ಪವು ಮನುಷ್ಯನ ವಶವು, ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.
ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು?
ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.
ಯೆರೆಮಿಯ 10:23
TSK
ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿ ಇಲ್ಲವೆಂದು ನನಗೆ ಗೊತ್ತು. ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನು ಇಡಲಾರನು.