ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ.
TSK
TSK · ಙ್ಞಾನೋಕ್ತಿಗಳು 17:15
مراجع Treasury of Scripture Knowledge في ಕನ್ನಡ IRV.
ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.
ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.
ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ.
ಯಾವನು ಅಧರ್ಮಿಗೆ, “ನೀನು ಧರ್ಮಾತ್ಮನು” ಎಂದು ಹೇಳುತ್ತಾನೋ, ಅವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು.
ಯೆಹೋವನು ಹೀಗೆನ್ನುತ್ತಾನೆ, “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.
ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.
ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.
ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು.
ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.