ಯೋಸೇಫನು, “ನನ್ನ ಹತ್ತಿರಕ್ಕೆ ದಯಮಾಡಿ ಬನ್ನಿರಿ” ಎಂದು ಅಣ್ಣಂದಿರಿಗೆ ಹೇಳಲು ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ “ಐಗುಪ್ತ ದೇಶಕ್ಕೆ ಮಾರಿಬಿಟ್ಟ ನಿಮ್ಮ ತಮ್ಮನಾದ ಯೋಸೇಫನು ನಾನೇ.
TSK
TSK · ಙ್ಞಾನೋಕ್ತಿಗಳು 19:21
مراجع Treasury of Scripture Knowledge في ಕನ್ನಡ IRV.
ಇದನ್ನು ಕೇಳಿ ಅಬ್ಷಾಲೋಮನೂ, ಎಲ್ಲಾ ಇಸ್ರಾಯೇಲರೂ, “ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೇಲನ ಆಲೋಚನೆಗಿಂತ ಒಳ್ಳೆಯದಾಗಿದೆ” ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು ಅಹೀತೋಫೇಲನ ಆಲೋಚನೆಯನ್ನು ನಿರರ್ಥಕಮಾಡಿದನು.
ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.
ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.
ಯೆಹೋವನು ಒಳ್ಳೆಯವನಿಗೆ ದಯೆತೋರಿಸುವನು, ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.
ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.
ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.
“ನಾವು ಯೆಹೂದದ ಮೇಲೆ ದಂಡೆತ್ತಿ ಹೆದರಿಸಿ, ಒಳಗೆ ನುಗ್ಗಿಕೊಂಡು ಹೋಗಿ, ಅದರಲ್ಲಿ ಟಬೇಲನ ಮಗನನ್ನು ಅರಸನನ್ನಾಗಿ ನೇಮಿಸಿಕೊಳ್ಳೋಣ” ಎಂದುಕೊಂಡಿದ್ದಾರೆ.
ಇದೇ ಲೋಕದಲ್ಲೆಲ್ಲಾ ನೆರವೇರಬೇಕಾದ ನನ್ನ ಉದ್ದೇಶ, ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
“ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.”
ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ನುಗ್ಗುವನು. ತಂದೆ, ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು, ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.
“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;
ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು;
ಹಾಗೆಯೇ ದೇವರು ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು.
ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.