ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.
TSK
TSK · ಙ್ಞಾನೋಕ್ತಿಗಳು 19:3
مراجع Treasury of Scripture Knowledge في ಕನ್ನಡ IRV.
¶ ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ.
ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.
ಆಗ ಪ್ರವಾದಿಯು ಅರಸನಿಗೆ, “ಸಂಹರಿಸಬೇಕೆಂದು ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟಿದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು. ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು” ಎಂದನು.
ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!
ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.
¶ “ಆದರೆ ನೀವು, ‘ಕರ್ತನ ಕ್ರಮವು ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲ.
ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.