ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.
TSK
TSK · ಙ್ಞಾನೋಕ್ತಿಗಳು 2:5
مراجع Treasury of Scripture Knowledge في ಕನ್ನಡ IRV.
ಯೆಹೋವನ ಭಯವೇ ಜ್ಞಾನಕ್ಕೆ ಮೂಲವು, ಪರಿಶುದ್ಧ ದೇವರ ತಿಳಿವಳಿಕೆಯೇ ವಿವೇಕವು.
ಜ್ಞಾನವೂ, ತಿಳಿವಳಿಕೆಯೂ, ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವುದು.
ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.
ನಾನು ನಿಮಗೆ ಹಿತ ಮಾಡುವುದನ್ನು ಬಿಟ್ಟು ವಿಮುಖನಾಗೆನು’ ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.
¶ ‹“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;›
‹ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ”› ಅಂದನು.
‹ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.›