¶ ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.
TSK
TSK · ಙ್ಞಾನೋಕ್ತಿಗಳು 20:7
مراجع Treasury of Scripture Knowledge في ಕನ್ನಡ IRV.
ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.
ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು.
ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.
ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.
ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.
ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.
ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು, ನಿನ್ನಲ್ಲಿರುವ ಸತ್ಯವನ್ನು ಕುರಿತು ಮತ್ತು ನೀನು ಸತ್ಯವಂತನಾಗಿ ಜೀವಿಸುವವನು ಎಂದು ಹೇಳುವುದನ್ನು ಕೇಳುವಾಗ, ನಾನು ಬಹಳ ಸಂತೋಷಪಟ್ಟೆನು.