TSK

TSK · ಙ್ಞಾನೋಕ್ತಿಗಳು 21:11

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಹೆದರಿಕೊಂಡು, “ಭೂಮಿಯು ನಮ್ಮನ್ನೂ ಸಹ ನುಂಗಿಬಿಟ್ಟೀತು!” ಎಂದು ಹೇಳಿ ಓಡಿಹೋದರು.

ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.

ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.

ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು.

ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.

ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.

ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.

ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.