¶ ಮನುಷ್ಯರ ಕೆಟ್ಟತನವು ಭೂಮಿಯ ಮೇಲೆ ಹೆಚ್ಚಾಗಿರುವುದನ್ನೂ, ಅವರು ತಮ್ಮ ಹೃದಯದಲ್ಲಿ ಯೋಚಿಸುವುದೆಲ್ಲವು ಯಾವಾಗಲೂ ಕೆಟ್ಟ ಆಲೋಚನೆಗಳನ್ನೇ ಮಾಡುತ್ತಿರುವುದನ್ನು ಯೆಹೋವನು ನೋಡಿದನು.
TSK
TSK · ಙ್ಞಾನೋಕ್ತಿಗಳು 21:8
مراجع Treasury of Scripture Knowledge في ಕನ್ನಡ IRV.
ನರನು ಎಷ್ಟರವನು! ಅವನು ಪರಿಶುದ್ಧನಾಗಿರುವುದು ಸಾಧ್ಯವೋ? ಮಾನವನಾಗಿ ಹುಟ್ಟಿದವನು ನೀತಿವಂತನಾಗಿರಬಹುದೇ?
ಅವರ ಮಾರ್ಗಗಳು ವಕ್ರವಾಗಿವೆ. ಅವರ ನಡತೆಗಳು ದುರ್ನಡತೆಗಳೇ.
ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.
¶ ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ.
ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು.
‹ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು.›
ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.
ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.
ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ.