ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು.
TSK
TSK · ಙ್ಞಾನೋಕ್ತಿಗಳು 24:21
مراجع Treasury of Scripture Knowledge في ಕನ್ನಡ IRV.
ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು.
ಅವನು ತನ್ನ ಜನರಿಗೆ, “ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ, ನನ್ನ ಒಡೆಯನೂ ಆಗಿದ್ದಾನೆ. ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿ ಮಾಡಲಿ” ಎಂದು ಹೇಳಿದನು
ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.
ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.
ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.
ಅರಸನ ಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ. ದ್ರೋಹಕ್ಕೆ ಸೇರದಿರು. ಅವನು ಇಷ್ಟಬಂದಂತೆ ಮಾಡಬಲ್ಲನು.
¶ ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.
ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ