ಎಸ್ತೇರಳು 7:10
TSK
ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.
TSK
مراجع Treasury of Scripture Knowledge في ಕನ್ನಡ IRV.
ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.
ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, ಅದರೊಳಗೆ ತಾನೇ ಬಿದ್ದುಹೋದನಲ್ಲಾ.
ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.
ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ
ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು.
ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು. ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?