ಆಗ ಅದು ಅವುಗಳಿಗೆ, ‘ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ, ಮನುಷ್ಯರು ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಅಂದಿತು.
TSK
TSK · ಙ್ಞಾನೋಕ್ತಿಗಳು 27:9
مراجع Treasury of Scripture Knowledge في ಕನ್ನಡ IRV.
ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.
ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.
ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ ಇವುಗಳ ಚೂರ್ಣಗಳಿಂದ ಸುವಾಸನೆಗೊಳಿಸಿದ್ದೇನೆ.
ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವುದು, ಸವಿತುಟಿಯಿಂದ ಉಪದೇಶ ಶಕ್ತಿಯು ಹೆಚ್ಚುವುದು.
ಸವಿನುಡಿಯು ಜೇನುಕೊಡ, ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ.
ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?
ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.
ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ.