ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.
TSK
TSK · ಙ್ಞಾನೋಕ್ತಿಗಳು 28:1
مراجع Treasury of Scripture Knowledge في ಕನ್ನಡ IRV.
¶ “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.
ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.
ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,
ಅವರು ಯೊರ್ದನ್ ನದಿಯವರೆಗೂ ಹೋಗಿ, ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನು ಸಾಮಾನುಗಳನ್ನು ಬಿಸಾಡಿದ್ದನ್ನೂ ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.
ಭಯ ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವುದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.
ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ.
ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು.
ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.
ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.
¶ ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.
¶ ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.
ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.