¶ ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.
TSK
TSK · ಙ್ಞಾನೋಕ್ತಿಗಳು 28:20
مراجع Treasury of Scripture Knowledge في ಕನ್ನಡ IRV.
ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು, ಸನ್ಮಾರ್ಗಿಯೇ ನನ್ನ ಸೇವೆಯಲ್ಲಿರಬೇಕು.
ಶಿಷ್ಟನ ತಲೆ ಆಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.
ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.
ಮೊದಲು ಬೇಗನೆ ಬಾಚಿಕೊಂಡ ಸ್ವತ್ತು, ಕೊನೆಯಲ್ಲಿ ಕಳೆದು ಹೋಗುವುದು.
ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.
¶ ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, ‹“ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ,›
ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ.
‹ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ,›‹ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು›‹ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು.›‹ನೀನು ಸಾಯುವ ತನಕ›‹ನಂಬಿಗಸ್ತನಾಗಿರು, ನಾನು ನಿನಗೆ›‹ಜೀವದ ಕಿರೀಟವನ್ನು ಕೊಡುವೆನು.›