TSK

TSK · ಙ್ಞಾನೋಕ್ತಿಗಳು 28:4

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ಸಮುವೇಲನು, “ಹಾಗಾದರೆ ಇದೇನು? ಕುರಿಗಳ ಕೂಗು ನನ್ನ ಕಿವಿಗೆ ಬೀಳುತ್ತದೆ, ದನಗಳ ಶಬ್ದವು ನನಗೆ ಕೇಳಿಸುತ್ತದೆ” ಎನ್ನಲು

¶ ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದು ಅವನಿಗೆ, “ಒಡೆಯಾ, ಕೇಳು ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ, ಅಂದರೆ ಯೆಷಿಮೋನಿನ ದಕ್ಷಿಣದಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.

¶ ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು.

ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು” ಎಂಬುದೇ.

¶ ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.

ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದೆನು. ಕೂಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು.

ಇದರ ದೆಸೆಯಿಂದ ನಾನು ಅಧಿಕಾರಿಗಳನ್ನು ಗದರಿಸಿ, “ದೇವಾಲಯವನ್ನು ಅಲಕ್ಷ್ಯ ಮಾಡಿದ್ದೇಕೆ?” ಎಂದು ಕೇಳಿದ್ದಲ್ಲದೆ ಬಿಟ್ಟು ಹೋದವರನ್ನು ಪುನಃ ಕರೆಯಿಸಿ ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು.

ಆಗ ನಾನು ಯೆಹೂದದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ, ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡುತ್ತಿದ್ದೀರಿ.

¶ ಮಹಾಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾಗಿದ್ದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು.

ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ, ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನರಸ್ತುತಿಯಿಂದಲೂ ಕೂಡಿದವನಾದರೂ,

¶ ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು?

ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು.

ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.

ಪೌಲನನ್ನು ಕರೆಯಿಸಿದನಂತರ ತೆರ್ತುಲ್ಯನು ಅವನ ಮೇಲೆ ತಪ್ಪುಹೊರಿಸುವುದಕ್ಕೆ ಪ್ರಾರಂಭಿಸಿ ಹೀಗಂದನು; “ಮಹಾ ಶ್ರೇಷ್ಠನಾದ ಫೇಲಿಕ್ಸನೇ, ನಿನ್ನ ಮೂಲಕವಾಗಿ ನಮಗೆ ಬಹು ಸಮಾಧಾನ ಉಂಟಾಗುವುದರಿಂದಲೂ, ನಿನ್ನ ಮುಂದಾಲೋಚನೆಯಿಂದ ಈ ದೇಶದ ಜನರಿಗೆ ಎಲ್ಲಾ ವಿಧದಲ್ಲಿಯೂ, ಎಲ್ಲಾ ಸ್ಥಳಗಳಲ್ಲಿಯೂ, ಸುಧಾರಣೆಗಳು ಆಗುವುದರಿಂದಲೂ

ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ.

ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.

¶ ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.