TSK

TSK · ಙ್ಞಾನೋಕ್ತಿಗಳು 28:9

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.

ನ್ಯಾಯವಿಚಾರಣೆಯಲ್ಲಿ ಅವನು ಅಪರಾಧಿ ಎಂದು ತೀರ್ಪುಹೊಂದಲಿ; ಅವನ ಪ್ರಾರ್ಥನೆಯೂ ಪಾಪವೆಂದು ಎಣಿಸಲ್ಪಡಲಿ.

ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.

ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.

¶ “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.

ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.