ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವನಿಗೆ ಮೊರೆಯಿಟ್ಟನು.
TSK
TSK · ಙ್ಞಾನೋಕ್ತಿಗಳು 29:10
مراجع Treasury of Scripture Knowledge في ಕನ್ನಡ IRV.
ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನೂ, ಅವನ ಕುಟುಂಬಕ್ಕೆ ಸೇರಿದ ನೋಬದ ಬೇರೆ ಎಲ್ಲಾ ಯಾಜಕರೊಡನೆ ಕರೆದುಕೊಂಡು ಬರುವಂತೆ ಕಳುಹಿಸಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬರಲು,
ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.
ಇಷ್ಟಸಿದ್ಧಿ ಮನಸ್ಸಿಗೆ ಸಿಹಿ, ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.
ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.
ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.
ಇದರ ನಿಮಿತ್ತ ಯೋಹಾನನು ಹೆರೋದನಿಗೆ, “ನಿನ್ನ ಅಣ್ಣನ ಹೆಂಡತಿಯು ಆತನು ಬದುಕಿರುವಾಗಲೇ ನಿನ್ನವಳ್ಳಾಗಿರುವುದು ಅಧರ್ಮವಲ್ಲವೇ” ಎಂದು ಹೇಳುತ್ತಿದ್ದನು.
ಆಗ ಯೇಸು, ‹“ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು”› ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.
¶ ‹“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.›
¶ ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.