ಕೇಳಿದ ಕಿವಿಯು ನನ್ನನ್ನು ಹರಸಿತು, ನೋಡಿದ ಕಣ್ಣು ಸಾಕ್ಷಿ ಕೊಟ್ಟಿತು.
TSK
TSK · ಙ್ಞಾನೋಕ್ತಿಗಳು 29:14
مراجع Treasury of Scripture Knowledge في ಕನ್ನಡ IRV.
ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.
ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ.
ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು, ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.
ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಚಿಕೊಳ್ಳದವನು ದೀರ್ಘಾಯುಷ್ಯನು.
ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”
ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.
ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ.
ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.