¶ ಮೋಶೆಯು ಜನರು ಅಂಕೆ ತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಸಡಿಲವಾಗಿ ಬಿಟ್ಟಿದ್ದರಿಂದ ಅವನ ವಿರೋಧಿಗಳು ಅಪಹಾಸ್ಯಮಾಡುವುದಕ್ಕೆ ಆಸ್ಪದವಾಯಿತು,
TSK
TSK · ಙ್ಞಾನೋಕ್ತಿಗಳು 29:18
مراجع Treasury of Scripture Knowledge في ಕನ್ನಡ IRV.
ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರೇಪಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್ ರಾಜನಾದ ಆಹಾಜನ ನಿಮಿತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರವಾಗಿ ತಗ್ಗಿಸಿದನು.
ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.
ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು.
ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.
ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.
ಅದಕ್ಕೆ ಯೇಸು, ‹“ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು”› ಅಂದನು.
‹ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು”› ಎಂದು ಹೇಳಿದನು.
ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.