ಸ್ವಾಮಿಯು ಆ ಮೂರ್ಖನಾದ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ. ಹೆಸರಿಗೆ ತಕ್ಕಂತೆ ಅವನು ಮೂರ್ಖನೇ ಆಗಿದ್ದಾನೆ. ನಿನ್ನ ದಾಸಿಯಾದ ನಾನು ಸ್ವಾಮಿಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ.
TSK
TSK · ಙ್ಞಾನೋಕ್ತಿಗಳು 29:7
مراجع Treasury of Scripture Knowledge في ಕನ್ನಡ IRV.
ಒಂದು ವೇಳೆ ನನಗೂ, ನನ್ನ ದಾಸನಿಗೂ, ಇಲ್ಲವೆ ದಾಸಿಗೂ ವ್ಯಾಜ್ಯವಾದಾಗ, ನಾನು ಅವರ ನ್ಯಾಯವನ್ನು ಅಲಕ್ಷ್ಯಮಾಡಿದ್ದರೆ
ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವುದನ್ನು ನೋಡಿ, ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ.
ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.
ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ, ನ್ಯಾಯವಾಗುವಂತೆ ಬಾಯಿ ತೆರೆ.
ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.
ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿದೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ.
¶ ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.