ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.
TSK
TSK · ಙ್ಞಾನೋಕ್ತಿಗಳು 3:10
مراجع Treasury of Scripture Knowledge في ಕನ್ನಡ IRV.
ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ, “ಜನರು ದೇವರಾದ ಯೆಹೋವನಿಗೋಸ್ಕರ ನೈವೇದ್ಯಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗಳಿಗೆ ಸಮೃದ್ಧಿಯಾಗಿ ಅನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತಾರೆ” ಎಂದನು.
ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
¶ ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು.
ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”
‹ಮತ್ತು›‹ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ”› ಅಂದನು.