¶ ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.
TSK
TSK · ಙ್ಞಾನೋಕ್ತಿಗಳು 3:20
مراجع Treasury of Scripture Knowledge في ಕನ್ನಡ IRV.
ದೇವರು ನಿನಗೆ ಆಕಾಶದ ಮಂಜನ್ನೂ, ಸಾರವುಳ್ಳ ಭೂಮಿಯನ್ನೂ ಕೊಟ್ಟು ದವಸಧಾನ್ಯಗಳನ್ನೂ, ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ.
ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.
ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು, ಅದರ ದ್ವಾರಗಳನ್ನು ಮುಚ್ಚಿದವರು ಯಾರು?
ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.
ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.