¶ ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”
TSK
TSK · ಙ್ಞಾನೋಕ್ತಿಗಳು 30:5
مراجع Treasury of Scripture Knowledge في ಕನ್ನಡ IRV.
ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.
ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.
ನಾನು ಯೆಹೋವನಿಗೆ, “ನೀನೇ ನನ್ನ ಶರಣನು, ನನ್ನ ದುರ್ಗವು, ನಾನು ಭರವಸವಿಟ್ಟಿರುವ ನನ್ನ ದೇವರು” ಎಂದು ಹೇಳುವೆನು.
ನಿನ್ನ ನುಡಿಯು ಪರಿಶುದ್ಧವಾದದ್ದು, ನಿನ್ನ ಸೇವಕನು ಅದನ್ನೇ ಪ್ರೀತಿಸುತ್ತಾನೆ.
ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.
ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.