ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
TSK
TSK · ಙ್ಞಾನೋಕ್ತಿಗಳು 30:9
مراجع Treasury of Scripture Knowledge في ಕನ್ನಡ IRV.
¶ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ, ನೀವು ಕೂಡಿಸದ ಉತ್ತಮ ವಸ್ತುಗಳಿಂದ
ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು.
ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.
ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.
ಒಂದು ವೇಳೆ ನಾನು ಬಂಗಾರದಲ್ಲಿ ಭರವಸವಿಟ್ಟು, ಅಪರಂಜಿಗೆ, ‘ನಿನ್ನನ್ನೇ ನಂಬಿದ್ದೇನೆ’ ಎಂದು ಹೇಳಿದ್ದರೆ,
ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು.
ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?
ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.
ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.
ಆಹಾರವು ನಿನ್ನವರಿಗೆ ಸಿಕ್ಕಿದಾಗ ಹೊಟ್ಟೆತುಂಬಿಸಿಕೊಂಡರು; ಹೊಟ್ಟೆ ತುಂಬಿದಾಗ ಅವರ ಮನಸ್ಸು ಉಬ್ಬಿಕೊಂಡಿತು; ಇದರಿಂದ ನನ್ನನ್ನು ಮರೆತುಬಿಟ್ಟರು.
ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.