ಸೌಲನು ಯೋನಾತಾನನ ಮಾತುಗಳನ್ನು ಲಾಲಿಸಿ, “ಯೆಹೋವನಾಣೆ, ಅವನನ್ನು ಕೊಲ್ಲುವುದಿಲ್ಲ” ಎಂದು ಪ್ರಮಾಣಮಾಡಿದನು.
TSK
TSK · ಙ್ಞಾನೋಕ್ತಿಗಳು 31:8
مراجع Treasury of Scripture Knowledge في ಕನ್ನಡ IRV.
ಅವನು, “ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಆಲೋಚಕರಲ್ಲೊಬ್ಬನು, ನಿನ್ನ ಮನೆಯಲ್ಲಿ ಗೌರವಸ್ಥನೂ ಆಗಿದ್ದನಲ್ಲವೇ?
ಪ್ರಭುಗಳು ಮೌನವಾಗಿ ಬಾಯ ಮೇಲೆ ಕೈಯಿಟ್ಟುಕೊಂಡರು.
ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.
ಜ್ಞಾನವು ಮೂರ್ಖನಿಗೆ ನಿಲುಕದು, ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.
ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.
¶ ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.
ಅವನು ಅವರಿಗೆ “ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?” ಎಂದು ಹೇಳಿದ್ದಕ್ಕೆ,