¶ ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.
TSK
TSK · ಙ್ಞಾನೋಕ್ತಿಗಳು 5:12
مراجع Treasury of Scripture Knowledge في ಕನ್ನಡ IRV.
ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು.
¶ ಯೆಹೋವನು ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.
ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.
ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.
ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.
ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.
ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ.
ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ,
¶ “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.