ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯೂ ವ್ಯಭಿಚಾರದಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಯೆಹೋವನ ಆಲಯದೊಳಗೆ ತರಲೇಬಾರದು. ಈ ಎರಡೂ ಯೆಹೋವನಿಗೆ ಅಸಹ್ಯವಾದ ವಿಷಯ.
TSK
TSK · ಙ್ಞಾನೋಕ್ತಿಗಳು 6:16
مراجع Treasury of Scripture Knowledge في ಕನ್ನಡ IRV.
ನ್ಯಾಯವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರೂ ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರಾಗಿದ್ದಾರೆ.
ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.
ಯೆಹೋವನು ನೀತಿವಂತರನ್ನು ಮತ್ತು ಅನೀತಿವಂತರನ್ನು ಪರೀಕ್ಷಿಸುತ್ತಾನೆ; ಬಲಾತ್ಕಾರವನ್ನು ಪ್ರೀತಿಸುವವರನ್ನು ಆತನು ದ್ವೇಷಿಸುತ್ತಾನೆ.
ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.
ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು.
ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.
ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.
ಮೂರರ ಭಾರದಿಂದ ಭೂಮಿಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು.
ಗಂಭೀರಾಗಮನದ ಮೂರು ಪ್ರಾಣಿಗಳುಂಟು, ಹೌದು, ಗಂಭೀರಗತಿಯ ನಾಲ್ಕುಂಟು.
ಯೆಹೋವನು ಇಂತೆನ್ನುತ್ತಾನೆ, “ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ, ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.
ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.
¶ ಯೆಹೋವನು ಇಂತೆನ್ನುತ್ತಾನೆ, “ಯೆಹೂದವು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿದರು. ಆತನ ವಿಧಿಗಳನ್ನು ಕೈಕೊಳ್ಳಲಿಲ್ಲ. ಅವರ ಪೂರ್ವಿಕರು ಹಿಂಬಾಲಿಸಿದ ಸುಳ್ಳುದೇವತೆಗಳು, ಇವರನ್ನು ದಾರಿ ತಪ್ಪುವಂತೆ ಮಾಡಿದವು.
ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.