ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
TSK
TSK · ಕೀರ್ತನೆಗಳು 113:3
مراجع Treasury of Scripture Knowledge في ಕನ್ನಡ IRV.
ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.
ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
¶ ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು.
ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”
ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’
ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,