¶ ನಾನು ಪೌಳಿಗೋಡೆಯನ್ನು ಪುನಃ ಕಟ್ಟಿಸಿದೆನು, ಆದರೆ ಹೆಬ್ಬಾಗಿಲುಗಳನ್ನೂ ಇನ್ನೂ ಇಡಿಸಿರಲಿಲ್ಲ. ಜೀರ್ಣೋದ್ಧಾರದ ಕಾರ್ಯಗಳೆಲ್ಲವೂ ಪೂರ್ಣವಾಯಿತೆಂಬುದು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ, ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು.
TSK
TSK · ಕೀರ್ತನೆಗಳು 147:13
مراجع Treasury of Scripture Knowledge في ಕನ್ನಡ IRV.
ನಾನು ಅವರಿಗೆ, “ಬಿಸಿಲೇರುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಾಗಲೇ ಬಾಗಿಲುಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ ಯೆರೂಸಲೇಮಿನ ನಿವಾಸಿಗಳೊಳಗೆ ಕಾವಲುಗಾರರನ್ನು ಗೊತ್ತುಮಾಡಿರಿ, ಅವರಲ್ಲಿ ಕೆಲವರು ತಮ್ಮ ಕಾವಲಿನ ಸ್ಥಳಗಳಲ್ಲಿಯೂ, ಇನ್ನು ಕೆಲವರನ್ನು ಅವರ ಮನೆಯ ಎದುರಿನಲ್ಲಿಯೂ ಕಾವಲಿರುವಂತೆ ನೇಮಿಸಬೇಕು” ಎಂದು ಆಜ್ಞಾಪಿಸಿದೆನು.
ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ.
ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ;
ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು.
ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.
ಯೆಹೋವನು ಇಂತೆನ್ನುತ್ತಾನೆ, “ಜನ ಮತ್ತು ಪಶುಗಳಿಲ್ಲದೆ ಹಾಳಾಗಿದೆ ಎಂದು ನೀವು ಹೇಳುವ ಈ ಸ್ಥಳದಲ್ಲಿ, ಅಂದರೆ ಜನ, ಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇಮಿನ ಬೀದಿಗಳಲ್ಲಿ,
ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; ಹಾಳು ಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆಯದೆ ಪೌಳಿಗೋಡೆಯೂ ಮತ್ತು ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವೆರಡೂ ಕುಸಿದುಹೋಗಿವೆ.
ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.
‹“ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.›