ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.
TSK
TSK · ಕೀರ್ತನೆಗಳು 21:3
مراجع Treasury of Scripture Knowledge في ಕನ್ನಡ IRV.
ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.
ದಾವೀದನು ಮಲ್ಕಾಮ್ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲಾ ತೂಕದ್ದು. ಅದರಲ್ಲಿದ್ದ ಅಮೂಲ್ಯವಾದ ರತ್ನಗಳನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದನು.
ನಾನು ಸಾಲ ತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು? ಆಕಾಶಮಂಡಲದ ಕೆಳಗಿರುವ ಸರ್ವಸ್ವವೂ ನನ್ನದೇ.
ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು; ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ.
ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.
ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?”
ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.