ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.
TSK
TSK · ಕೀರ್ತನೆಗಳು 21:4
مراجع Treasury of Scripture Knowledge في ಕನ್ನಡ IRV.
ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, “ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದರು.
ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.
ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.
ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು,
ನಾನು ಬದುಕುವಂತೆ ನಿನ್ನ ಕರುಣೆಯು ನನಗೆ ದೊರೆಯಲಿ, ನಿನ್ನ ಧರ್ಮಶಾಸ್ತ್ರವೇ ನನ್ನ ಆನಂದವಾಗಿದೆ.
ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.
‹ಸದಾ ಜೀವಿಸುವವನೂ ಆಗಿದ್ದೇನೆ.›‹ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.›‹ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.›