ನನ್ನ ಜೀವವು ಗಾಳಿಯಂತೆ ಇದೆಯೆಂತಲೂ, ನನ್ನ ಕಣ್ಣು ಇನ್ನು ಸುಖವನ್ನು ಕಾಣುವುದಿಲ್ಲವೆಂತಲೂ ನೆನಪು ಮಾಡಿಕೋ.
TSK
TSK · ಕೀರ್ತನೆಗಳು 39:6
مراجع Treasury of Scripture Knowledge في ಕನ್ನಡ IRV.
“ಮಾನವ ಜನ್ಮ ಪಡೆದವನು, ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು.
ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.
ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.
ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.
ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ, ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ?
ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು ಸಂಪಾದಿಸಿಕೊಂಡೆನು.
ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
ಆ ಆಸ್ತಿಯು ವ್ಯರ್ಥ ಪ್ರಯತ್ನದಿಂದ ಹಾಳಾಗುವುದು. ಅವನಿಗೆ ಮಗನಿದ್ದರೆ ಆ ಮಗನಿಗಾಗಿ ಅವನ ಕೈಯಲ್ಲಿ ಏನೂ ಇರದು.
ನಿನ್ನ ಹೃದಯದಿಂದ ದುಃಖವನ್ನೂ, ದೇಹದಿಂದ ಶ್ರಮೆಯನ್ನೂ ತೊಲಗಿಸು, ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ.
ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.
ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.
‹ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಆಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವುದೇಕೆ?›
ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ ಈ ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ.
ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. ಅಂತ್ಯಕಾಲ ಬಂದರೂ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.
ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.