ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.
TSK
TSK · ಪ್ರಕಟನೆ 13:7
مراجع Treasury of Scripture Knowledge في ಕನ್ನಡ IRV.
ಇದನ್ನು ನೀನು ಕೇಳಲಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು. ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತು.
ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.
ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.
ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.
¶ “ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.
“ಇವೆಲ್ಲವುಗಳ ಅಧಿಕಾರವನ್ನೂ ಇವುಗಳ ವೈಭವವನ್ನೂ ನಿನಗೆ ಕೊಡುವೆನು; ಇದೆಲ್ಲಾ ನನಗೆ ಕೊಡಲ್ಪಟ್ಟಿದೆ, ಇದನ್ನು ನನ್ನ ಮನಸ್ಸು ಬಂದವನಿಗೆ ಕೊಡುತ್ತೇನೆ;
ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.
¶ ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.
ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟು,